Sunday, November 30, 2008

ಗಣಪತಿ ಕೌತುಕ

ಯಕ್ಷಗಾನ ಪೂರ್ವ ರಂಗದಲ್ಲಿ ಬರುವ ಗಣಪತಿ ಕೌತುಕವನ್ನು ಕೇಳುವುದೆಂದರೆ ಕಿವಿಗಳಿಗೆ ಹಬ್ಬ .

ಮಂಗಳೂರು ಆಕಾಶವಾಣಿಯಲ್ಲಿ ಕೃಷಿರಂಗ ಕಾರ್ಯಕ್ರಮದಲ್ಲಿ ಶ್ರೀ ದಾಮೋದರ ಮಂಡೆಚ್ಚರು ಹಾಡಿದ ಗಣಪತಿ ಕೌತುಕ ಸಣ್ಣವನಿದ್ದಾಗ ಕೇಳಿದ್ದೆ . ನಂತರ ತೆಂಕುತಿಟ್ಟು ಹಿತರಕ್ಷಣಾ ವೇದಿಕೆ ,ಸುಳ್ಯದವರು ಬಿಡುಗಡೆ ಮಾಡಿದ 'ಯಕ್ಷಗಾನ ಪೂರ್ವರಂಗ' ಧ್ವನಿ ಸುರುಳಿಯಲ್ಲಿ ಬಲಿಪ ಭಾಗವತರ ಗಣಪತಿ ಕೌತುಕ ಅದ್ಭುತವಾಗಿ ಮೂಡಿ ಬಂದಿದೆ . ಗಣಪತಿ ಕೌತುಕ ಪೂರ್ಣ ಪಾಠ ಬಾಯಿಪಾಠ ಬಂದರೆ ಮಾತ್ರ ಅದಕ್ಕೆ ಮದ್ದಲೆ ಸಾಥ್ ನೀಡುವುದಕ್ಕೆ ಸಾಧ್ಯ . ಹಾಗಾಗಿ ಪೂರ್ವರಂಗದಲ್ಲಿ ಅದನ್ನು ಹೇಳಬೇಕೆಂದರೆ ಭಾಗವತರಿಗೆ ಹಾಗೂ ಮದ್ದಲೆಗಾರನಿಗೆ ಅದು ಗೊತ್ತಿರಲೇ ಬೇಕು !


ಮತ್ತೆ ಮತ್ತೆ ನನ್ನನ್ನು ಕಾಡುತ್ತಿರುವ ಗಣಪತಿ ಕೌತುಕದ ಆರಂಭ ಹೀಗಿದೆ

" ಕಿಡ್ತಕ ಥೈ ಧಿಧ್ಧಿ ಥೈ ತಾಂ ಕಿಡ್ತಕ ತತ್ತರಿ ತತ್ತಾಂ , ತತ್ತೊಂ ಕಿಡ್ತಕ ತರಿಕಿಟ ಕಿಟತಕ ಅರುದಿನ ಮರುಮಗ ವಿಘ್ನ ವಿನಾಶಕ ......."

ಇತ್ತೀಚಿಗೆ ಮರೆಗೆ ಸಂದಿರುವ ಪೂರ್ವ ರಂಗದ ಒಂದು ವಿಶಿಷ್ಟ ಹಾಡು ಮುಂದಿನ ಪೀಳಿಗೆಗೆ " ಕೌತುಕ "ವಾಗಿಯೇ ಉಳಿಯಲಿದೆಯೇನೋ ?