ಚಿಕ್ಕವನಿದ್ದಾಗ ಆಕಾಶವಾಣಿ ಮ೦ಗಳೂರು ಕೇಂದ್ರದಿಂದ ಪ್ರಸಾರವಾಗುತ್ತಿದ್ದ ಸಾಕ್ಷಾತ್ಕಾರ ಸಿನೆಮಾದ ಹಾಡು ಹೀಗಿತ್ತು ...
ಒಲವೆ ಜೀವನ ಸಾಕ್ಷಾತ್ಕಾರ
ಒಲವೆ ಮರೆಯದ ಮಮಕಾರ
ಒಲವೆ ಮರೆಯದ ಮಮಕಾರ . ಪಲ್ಲವಿ .
ಧುಮ್ಮಿಕ್ಕಿ ಹರಿಯುವ ಜಲಧಾರೆಯಲ್ಲು
ದುಂಬಿಯ ಹಾಡಿನ ಝೇಂಕಾರದಲ್ಲು
ಘಮ್ಮನೆ ಹೊಮ್ಮಿರುವ ಹೊಸ ಹೂವಿನಲ್ಲು
ತುಂಬಿದೆ ಒಲವಿನ ಸಾಕ್ಷಾತ್ಕಾರ . ಒಲವೆ ...
ವಸಂತ ಕೋಗಿಲೆ ಪಂಚ ಮನೋಹರ
ಗಾಂಧಾರ ಭಾಷೆಯ ಹಕ್ಕಿಗಳಿಂಚರ
ಈ ಮಲೆನಾಡಿನ ಭೂರಮ್ಯ ಶೃಂಗಾರ
ಚೆಲುವಿನ ಒಲವಿನ ಸಾಕ್ಷಾತ್ಕಾರ . ಒಲವೆ ...
ಒಲವಿನ ಪೂಜೆಗೆ ಒಲವೆ ಮಂದಾರ
ಒಲವೆ ಬದುಕಿನ ಬಂಗಾರ
ಒಲವಿನ ನೆನಪೆ ಹೃದಯಕೆ ಮಧುರ
ಒಲವೆ ದೈವದ ಸಾಕ್ಷಾತ್ಕಾರ . ಒಲವೆ ....
ಮೊನ್ನೆ ಬೆಂಗಳೂರು ನಗರದ ಚಾಟ್ ಸೆಂಟರ್ ನಲ್ಲಿ ಕೇಳಿ ಬರುತ್ತಿದ್ದ ಹಾಡು...
ಹೊಡಿ ಮಗ ಹೊಡಿ ಮಗ ಹೊಡಿ ಮಗ ಬಿಡಬೇಡ ಅವನಾ ....
ಒಮ್ಮೆಲೇ ನನಗನಿಸಿದ್ದು " ಅಯ್ಯೋ ಎಂತ ಸಾಂಸ್ಕೃತಿಕ ದಿವಾಳಿತನ ನಮ್ಮವರನ್ನು ಆವರಿಸಿದೆ " ಎಂದು !
ಪ್ರಾಥಮಿಕ ಶಾಲೆಗೆ ಹೋಗುವ ಬಾಲಕನೋರ್ವ " ಈ ಪ್ರೀತಿ ಒಂಥರಾ ...... " ಹಾಡನ್ನು ಗುನುಗುನಿಸುತ್ತಾ ಹೋಗುತ್ತಿದ್ದರೆ ನಾಲ್ಕನೆ ತರಗತಿಯ ಬಾಲೆಯೊಬ್ಬಳು " ಅನಿಸುತಿದೆ ಯಾಕೊ ಇಂದು ನೀನೀನೆ ನನ್ನವನೆಂದು ...." ಎಂದು ತನ್ಮಯವಾಗಿ ಹಾಡುತ್ತಿದ್ದಳು !
ಹಾಗಾದರೆ ಹಣ ಗಳಿಕೆಯೊಂದೇ ಸಿನಿಮಾದವರ ಧ್ಯೇಯವೇ ? ಇವರಿಗೆ ಸಾಮಾಜಿಕ ಕಳಕಳಿ ಸ್ವಲ್ಪವೂ ಇಲ್ಲವೇ ?? ಮಕ್ಕಳು ತಮ್ಮ ಪರಿಸರಕ್ಕನುಗುಣವಾಗಿ ಬೆಳೆಯುತ್ತಾರೆ . ಬೆಳೆಯುವ ಸಿರಿ ಮೊಳಕೆಗೆ ಈ ರೀತಿ "ರಾಸಾಯನಿಕ ಗೊಬ್ಬರ"ವನ್ನು ಹಾಕುವುದು ಯಾಕೆ ? ಯಾರಿಗೆ ಇದರಿಂದ ಏನು ಲಾಭ??
ನೀವು ಈ ಬಗ್ಗೆ ಯೋಚಿಸಿದ್ದಿರಾ ????
Wednesday, March 12, 2008
Subscribe to:
Post Comments (Atom)
1 comment:
ಪ್ರಿಯರೇ,
ನಮಸ್ಕಾರ. ಹೇಗಿದ್ದೀರಿ?
ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!
ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.
ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು
ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.
ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.
ಅಲ್ಲಿ ಸಿಗೋಣ,
ಇಂತಿ,
ಸುಶ್ರುತ ದೊಡ್ಡೇರಿ
Post a Comment