" ಮಕರಾಕ್ಷ ಮಡಿದ ವಾರ್ತೆಯ ಕೇಳಿ ......" ಎಂದು ಸುಶ್ರಾವ್ಯವಾಗಿ ಕಡತೋಕರ
ಪದ್ಯಗಳು ತೇಲಿ ಬರುತ್ತಿದ್ದರೆ ತನ್ಮಯವಾಗಿ ರ೦ಗದ ಮೇಲೆ ಅಭಿನಯಿಸುತ್ತಿದ್ದ
ಪಕಳಕುಂಜರ ರಾವಣ ಇಂದು ಮರಣಶಯ್ಯೆಯಲ್ಲಿ ದಿನವೆಣಿಸುತ್ತಿದ್ದಾನೆ ಎಂದು ತಿಳಿದಾಗ
ಮನಸ್ಸಿಗೆ ಬಹಳ ಖೇದವಾಗುತ್ತದೆ. ಪಕಳಕುಂಜರ ಅಂತರಂಗದ ಮಾತನ್ನು ಉದಯವಾಣಿಯಲ್ಲಿ ಓದಿದಾಗ ಎಂಥವರಿಗೂ ಮನಕಲಕುತ್ತದೆ .
ಚಿಕ್ಕವನಿದ್ದಾಗಲೇ ಪಕಳಕುಂಜರ ರಾವಣ, ಮೈರಾವಣ , ರುದ್ರಭೀಮ ,ಅಜಮುಖಿ, ಶೂರ್ಪನಖಿ, ಕುಕ್ಕಿತ್ತಾಯ , ಶು೦ಭಾಸುರ ,ಹಿಡಿಂಬ ಮುಂತಾದ ಬಣ್ಣದ ವೇಷಗಳನ್ನು ಎವೆಯಿಕ್ಕದೆ ನೋಡುತ್ತಿದ್ದವರಲ್ಲಿ ನಾನೂ ಒಬ್ಬ. ಶಿಸ್ತುಧ್ಧವಾದ ಕುಣಿತ, ತೆರೆಪೊರಪ್ಪಾಟು, ಚುಟ್ಟಿ ಇಡುವ ಕ್ರಮಗಳಿಗೆ ಹೆಸರಾದ ಕೃಷ್ಣ ನಾಯ್ಕರು ಅತೀವ ಶ್ರಧ್ಧೆಯಿಂದ ಪಾತ್ರ ನಿರ್ವಹಣೆ ಮಾಡುತ್ತಿದ್ದರು.
ಅದುವರೆಗೆ ಬಣ್ಣದ ಕುಟ್ಯಪ್ಪು , ಬಣ್ಣದ ಮಾಲಿಂಗ, ಚಂದ್ರಗಿರಿ ಅಂಬು , ತ್ರಿವಿಕ್ರಮ ಶೆಣೈ ಮುಂತಾದ ದಿಗ್ಗಜರು ತಮ್ಮ ಬಣ್ಣದ ವೇಷದ ಭೀಕರತೆಗೆ ಹೆಸರಾದರೆ ಪಕಳಕುಂಜ ಕೃಷ್ಣ ನಾಯ್ಕರು ಬಣ್ಣದ ವೇಷಕ್ಕೆ "ಲಾಲಿತ್ಯವನ್ನು" ನೀಡಿ ರಂಗದಲ್ಲಿ ಮೆರೆಸಿದವರು. ಅವರ ಕತ್ತರಿ ಕುಣಿತ ನೋಡುವುದೇ ಕಣ್ಣಿಗೆ ಹಬ್ಬ.
ಪಕಳಕುಂಜರ ದುಶ್ಯಾಸನ ವಧೆಯ ದುಶ್ಯಾಸನ ವೇಷದ ಪ್ರವೇಶವನ್ನು ಕೆಳಗಿನ ಕೊಂಡಿಯಲ್ಲಿ ಕಾಣಬಹುದು. (ರುದ್ರ ಭೀಮನ ಪಾತ್ರದಲ್ಲಿ ಬಣ್ಣದ ಮಾಲಿಂಗ .)
http://www.youtube.com/watch?v=aDjpL_UslZk
ಕಾಲನ ಹೊಡೆತಕ್ಕೆ ಸಿಕ್ಕು ಜರ್ಜರಿತರಾಗಿ ಜೀವಂತ ದಂತಕತೆಯಾಗಿರುವ ಇವರಿಗೆ ಸಹಾಯಹಸ್ತ ನೀಡಬೇಕಾದ್ದು ಯಕ್ಷಪ್ರೀಮಿಗಳೆಲ್ಲರ ಕರ್ತವ್ಯ .
Friday, August 8, 2008
Subscribe to:
Post Comments (Atom)
2 comments:
ಅದು 'ದುಶ್ಯಾಸನ' ಅಲ್ಲ. 'ದುಶ್ಶಾಸನ', 'ಶ'ಕಾರಕ್ಕೆ 'ಶ'ಕಾರದ ಒತ್ತು. (ಸ0ಸ್ಕೃತದಲ್ಲಿ ಬಿಡಿಸಿದಾಗ ದು: + ಶಾಸನ ಎ0ದಾಗುತ್ತದೆ)
Pakalakunja - ivara attahaasa keludakke impu!
ella bannada veshadanthge alla ivara attahaasa. adu shruthi baddavada deergha attahasa. kelalu bhala impu.
Post a Comment