Friday, May 18, 2012

ಯಕ್ಷಗಾನ ಭಾಗವತರಿಗೆ ಬೀಳ್ಕೊಡುಗೆ

ವೃತ್ತಿರಂಗದಿಂದ ನಿವೃತ್ತರಾಗುವವರಿಗೆ ಬೀಳ್ಕೊಡುಗೆ ಮಾಡುವ ಸತ್ಸಂಪ್ರದಾಯ ಹೆಚ್ಚಿನ ಎಲ್ಲ ಕ್ಷೇತ್ರದಲ್ಲಿ ಕಾಣುತ್ತೇವೆ . ಆದರೆ ಹಲವಾರು ವರ್ಷಗಳಿಂದ ಯಕ್ಷಗಾನದಲ್ಲಿ ದುಡಿದ ಕಲಾವಿದರು ನಿವೃತ್ತರಾಗುವಾಗ ಅವರು ಪಡಕೊಂಡು ಹೋಗುವುದು ಅನಾರೋಗ್ಯ, ಬಡತನದ ಬೇಗೆ ಮಾತ್ರ! 
ಬಡಗು ತಿಟ್ಟಿನ ಖ್ಯಾತ ಪ್ರಯೋಗಶೀಲ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರು ಸ್ವಯಂನಿವೃತ್ತರಾಗುವ ಸಂಧರ್ಭ ಅವರು ಇಷ್ಟು ವರ್ಷಗಳ ಸೇವೆ ಸಲ್ಲಿಸಿದ ಮೇಳ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿರುವುದು ನಿಜಕ್ಕೂ ಸಂತಸದ ವಿಚಾರ . ಇದು ಇತರ ಮೇಳದವರಿಗೆ ಅನುಸರಣೀಯ ಕಾರ್ಯ .
ಕಾರ್ಯಕ್ರಮಕ್ಕೆ ಶುಭಕೋರೋಣ ..